ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಉತ್ತರ ನೀಡುವುದರ ಜೊತೆಗೆ ರಾಜ್ಯಪಾಲರಿಗೆ ಸಮರ್ಪಕವಾದ ದಾಖಲೆ ಸಲ್ಲಿಕೆ ಮಾಡಿದ್ದಾರೆ.
ವೈಯಕ್ತಿಕವಾಗಿ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ. ತಮಗೇ ನೇರವಾಗಿ ನೋಟಿಸ್ ನೀಡಿದ ಪರಿಣಾಮ ರಾಜ್ಯಪಾಲರಿಗೆ ಖುದ್ದು ಸಿಎಂ ವಿವರಣೆ ನೀಡಿದ್ದಾರೆ. ಅಲ್ಲದೆ, ರಾಜ್ಯಪಾಲರು ನೋಟಿಸ್ ನಲ್ಲಿ ಉಲ್ಲೇಖಸಿರುವ ಆರೋಪಗಳನ್ನು ಸಿಎಂ ನಿರಾಕರಿಸಿದ್ದಾರೆ.